'ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ': ವಾಟ್ಸಾಪ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
- Feb 3
- 1 min read

ನವದೆಹಲಿ: ವಾಟ್ಸಾಪ್ನ 2021ರ ಗೌಪ್ಯತಾ ನೀತಿಗೆ ಸಂಬಂಧಿಸಿದಂತೆ ಮೆಟಾ ಸಂಸ್ಥೆಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಖಾಸಗಿತನದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಾ, "ನೀವು ನಮ್ಮ ದೇಶದ ಸಂವಿಧಾನ ಮತ್ತು ನಿಯಮಗಳನ್ನು ಪಾಲಿಸಲು ಸಾಧ್ಯವಿಲ್ಲ ಎಂದಾದರೆ ಭಾರತದಿಂದ ನಿರ್ಗಮಿಸಿ" ಎಂದು ಖಡಕ್ ಎಚ್ಚರಿಕೆ ನೀಡಿದೆ. ಭಾರತೀಯ ಪ್ರಜೆಯ ಒಬ್ಬ ಡಿಜಿಟ್ ದತ್ತಾಂಶವನ್ನೂ ಪಡೆಯಲು ಅಥವಾ ಹಂಚಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಮೆಟಾಗೆ ಸಂದೇಶ ರವಾನಿಸಿದೆ. ದತ್ತಾಂಶದ ಸುರಕ್ಷತೆ ಮತ್ತು ಪ್ರಜೆಗಳ ಗೌಪ್ಯತೆಯೇ ನಮಗೆ ಮುಖ್ಯ ಎಂದು ಪೀಠವು ಅಭಿಪ್ರಾಯಪಟ್ಟಿದೆ.







Comments