;
top of page

ಯಶವಂತಪುರ–ಮಂಗಳೂರು ವಂದೇ ಭಾರತ್ 2ನೇ ಟ್ರಯಲ್ ರನ್ ಯಶಸ್ವಿ: ನಿಗದಿತ ಸಮಯಕ್ಕೂ ಮುನ್ನ ಸಂಚಾರ ಪೂರ್ಣ!

4 days ago
1 min read

ಬೆಂಗಳೂರು: ಬಹುನಿರೀಕ್ಷಿತ ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ನಡುವಿನ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ 2ನೇ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಯಶಸ್ವಿಯಾಗಿ ಪೂರ್ಣಗೊಂಡಿದೆ. ದಕ್ಷಿಣ ಪಶ್ಚಿಮ ರೈಲ್ವೆಯ ತಾಂತ್ರಿಕ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಪ್ರಯಾಣದಲ್ಲಿ ಪಾಲ್ಗೊಂಡು ರೈಲಿನ ಸಂಚಾರ ಸಮಯ, ಕಾರ್ಯಾಚರಣೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.

ಘಾಟ್ ಪ್ರದೇಶದಲ್ಲಿ ವಿದ್ಯುತ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ರೈಲಿನ ವೇಗವನ್ನು ಪರೀಕ್ಷಿಸಿದ್ದು, ಈ ಬಾರಿಯ ಟ್ರಯಲ್ ರನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ತಲುಪಿದೆ. ಮೊದಲ ಟ್ರಯಲ್ ವೇಳೆ ಘಾಟ್ ಭಾಗದಲ್ಲಿ ಎದುರಾಗಿದ್ದ ಪ್ಯಾಂಟೋಗ್ರಾಫ್ ತಾಂತ್ರಿಕ ತೊಡಕುಗಳನ್ನು ಈ ಬಾರಿ ಸರಿಪಡಿಸಲಾಗಿದೆ.

ಇದೇ ವೇಳೆ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗೆ 'ಕಬಕ-ಪುತ್ತೂರು' ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ತಾತ್ಕಾಲಿಕ ನಿಲುಗಡೆ ನೀಡಲಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಸ್ವಾಗತಿಸಿದ್ದಾರೆ. ರೈಲಿನ ವೇಳಾಪಟ್ಟಿಯಲ್ಲೂ ಅಗತ್ಯ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದ ಪ್ರಯಾಣಿಕರಲ್ಲಿ ಈ ಆಧುನಿಕ ರೈಲು ಸೇವೆ ಹೆಚ್ಚಿನ ಆಶಾದಾಯಕ ವಾತಾವರಣ ನಿರ್ಮಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page